ಶಿಕ್ಷಣ ರಕ್ತಗತ ವಿಷಯಲ್ಲೋ ಋಣದ ವಿಚಾರದಲ್ಲೂ?

ಶಿಕ್ಷಣದಲ್ಲಿ ಬದಲಾವಣೆ ಮಾಡೋದಕ್ಕೆ ಪ್ರತಿಯೊಬ್ಬರೂ ತಮ್ಮ ತಮ್ಮ ಮನಸ್ಸಿಗೆ ಬಂದ ಹಾಗೆ ಸಲಹೆ,ಸೂಚನೆ ಕೊಡುತ್ತಾರೆ. ಆದರೆ ಮಕ್ಕಳ ಮನಸ್ಸನ್ನರಿತು ಅವರ ಪರಿಸ್ಥಿತಿ ,ಮನಸ್ಥಿತ...

Wednesday, October 8, 2025

ಶ್ರೀ ಶಂಕರಾಚಾರ್ಯರ ಪ್ರಶ್ನೋತ್ತರ ಮಾಲಿಕ

ಶ್ರೀ ಶಂಕರ ಭಗವತ್ಪಾದರಿಂದ ರಚಿತವಾದ
ಪ್ರಶ್ನೋತ್ತರಮಾಲಿಕಾ , ಬದುಕಿನಲ್ಲಿ ಏನನ್ನು
ಮಾಡಬೇಕು , ಏನನ್ನು ಮಾಡಬಾರದೆಂದು ಬಹಳ
ಸುಂದರ , ಸರಳವಾಗಿ ತಿಳಿಸುತ್ತದೆ..

ಈ ಲೇಖನವನ್ನು ತಪ್ಪದೇ ಓದಿ..

ಪ್ರಶ್ನೆ- ಭಗವನ್ ಕಿಮ್ ಉಪಾದೇಯಮ್..?
ಪೂಜ್ಯರೇ ಜೀವನದಲ್ಲಿ
ಏನನ್ನು ಅನುಸರಿಸಬೇಕು ?
ಉತ್ತರ - ಗುರುವಚನಮ್
ಜೀವನದಲ್ಲಿ ಗುರು-ಹಿರಿಯರ
ಮಾತನ್ನು ಅನುಸರಿಸಬೇಕು.

ಪ್ರಶ್ನೆ - ಕಃ ಪಥ್ಯತರಃ ?
ಪ್ರಪಂಚದಲ್ಲಿ ಹಿತಕರವಾದದ್ದು ಯಾವುದು ?
ಉತ್ತರ - ಧರ್ಮಃ
ಧರ್ಮವೇ ಹಿತಕರವಾದದ್ದು.

ಪ್ರಶ್ನೆ - ಕಿಮ್ ವಿಷಮ್ ?
ಯಾವುದು ವಿಷ ?
ಉತ್ತರ - ಅವಧೀರಣಾ ಗುರುಷು
ಗುರು-ಹಿರಿಯರಿಗೆ ಮಾಡಿದ ಅವಮಾನ,ಅಗೌರವವೇ ವಿಷ.

ಪ್ರಶ್ನೆ - ಕಿಮ್ ಮನುಜೇಷು ಇಷ್ಟತಮಮ್ ?
ಮನುಷ್ಯರಲ್ಲಿ ಇರಲೇಬೇಕಾದ ಶ್ರೇಷ್ಠ ಗುಣ
ಯಾವುದು ?
ಉತ್ತರ - ಸ್ವಪರಹಿತಾಯ ಉದ್ಯತಂ ಜನ್ಮ
ಯಾವಾಗಲೂ ತನ್ನ ಮತ್ತು ಇತರರ ಸುಖಕ್ಕಾಗಿ
ಜೀವನವನ್ನು ತೊಡಗಿಸಿಕೊಳ್ಳುವುದು.

ಪ್ರಶ್ನೆ - ಕೇ ಚ ದಸ್ಯವಃ ?
ಕಳ್ಳರು ಯಾರು ?
ಉತ್ತರ - ವಿಷಯಾಃ
ಸುಖಪಭೋಗ
ವಸ್ತುಗಳೇ ಕಳ್ಳರು (ಅವು ಇಂದ್ರಿಯಗಳ ಮೂಲಕ
ಮನಸನ್ನು
ಅಪಹರಿಸುತ್ತವೆ )

ಪ್ರಶ್ನೆ - ಕೋ ವೈರೀ ?
ನಮ್ಮ ಶತ್ರು ಯಾರು ?
ಉತ್ತರ - ಯಸ್ತು ಅನುದ್ಯೋಗಃ
ನಿರುದ್ಯೋಗವೇ ನಮ್ಮ ಶತ್ರು.

ಪ್ರಶ್ನೆ - ಕಿಮ್ ಗುರುತಾಯಾಂ ಮೂಲಮ್ ?
ಶ್ರೇಷ್ಠತೆಯ ಮೂಲ ಯಾವುದು ?
ಉತ್ತರ - ಯತ್ ಏತತ್ ಅಪ್ರಾರ್ಥನಮ್ ನಾಮ ಇತರರಲ್ಲಿ ಏನನ್ನೂ ಅಂಗಲಾಚದಿರುವುದೇ ಜೀವನದ
ಶ್ರೇಷ್ಠತೆ

ಪ್ರಶ್ನೆ - ಕಿಮ್ ದುಃಖಮ್ ?
ದುಃಖವೆಂದರೇನು..?
ಉತ್ತರ - ಅಸಂತೋಷಃ
ಸಂತೋಷವನ್ನು ಕಳೆದುಕೊಂಡಾಗಿನ ಅವಸ್ಥೆ.

ಪ್ರಶ್ನೆ - ಕಿಮ್ ಜಾಡ್ಯಮ್ ?
ಆಲಸ್ಯತನವು ಯಾವುದು ?
ಉತ್ತರ - ಪಾಠತೋSಪಿ ಅನಭ್ಯಾಸಃ
ವಿದ್ಯಾವಂತನಾಗಿಬಿಟ್ಟೆನೆಂದು ತಿಳಿದು , ಅಧ್ಯಯನ
ಮಾಡದಿರುವುದು.

ಪ್ರಶ್ನೆ - ನಲಿನೀ-ದಲ-ಗತ-ಜಲವತ್-ತರಲಂ 
ಕಿಮ್ ?
ಕಮಲದ ಎಲೆಯ ಮೇಲಿನ ನೀರಿನಂತೆ
ಚಂಚಲವಾದದ್ದು ಯಾವುದು ?
ಉತ್ತರ - ಯೌವ್ವನಂ - ಧನಂ ಚ ಆಯುಃ
ತಾರುಣ್ಯ,ಸಂಪತ್ತು ಮತ್ತು ಆಯುಷ್ಯ
ಇವು ಕಮಲದ ಎಲೆ ಮೇಲಿನ ನೀರಿನಂತೆ
ಚಂಚಲವಾದವುಗಳು.

ಪ್ರಶ್ನೆ - ಕಿಮ್ ಚ ಅನರ್ಘಮ್ ?
ಬೆಲೆ ಕಟ್ಟಲಾಗದ್ದು ಯಾವುದು ?
ಉತ್ತರ - ಯದವಸರೇ ದತ್ತಮ್ ?
ಸರಿಯಾದ ಸಮಯದಲ್ಲಿ ಅನ್ಯರಿಗೆ ದಾನ ಮಾಡಿದ್ದು.

ಪ್ರಶ್ನೆ - ಆಮರಣಾತ್ ಕಿಮ್ ಶಾಲ್ಯಮ್ ?
ಸಾಯುವವರೆಗೂ ಬಾಣದಂತೆ
ಚುಚ್ಚುತ್ತಲೇ ಇರುವುದು ಯಾವುದು ?
ಉತ್ತರ - ಪ್ರಚ್ಛನ್ನಂ ಯತ್ ಕೃತಂ ಪಾಪಮ್
ಬಚ್ಚಿಟ್ಟುಕೊಂಡ ಪಾಪಕಾರ್ಯ
ಸಾಯುವವರೆಗೂ ಬಾಣದಂತೆ
ಚುಚ್ಚತ್ತಲೇ ಇರುತ್ತದೆ .

ಪ್ರಶ್ನೆ - ಕುತ್ರ ವಿಧೇಯೋ ಯತ್ನಃ ?
ಯಾವ ವಿಷಯದಲ್ಲಿ ಪ್ರಯತ್ನವನ್ನು ಮಾಡಬೇಕು ?
ಉತ್ತರ - ವಿದ್ಯಾಭ್ಯಾಸೇ ಸದೌಷಧೇ ದಾನೇ
ವಿಧ್ಯಾಭ್ಯಾಸದಲ್ಲಿ ,ಒಳ್ಳೆಯ ಔಷಧೋಪಚಾರದಲ್ಲಿ
ಮತ್ತು ದಾನ ಮಾಡುವಲ್ಲಿ ಪ್ರಯತ್ನ
ಮಾಡಬೇಕು..

ಪ್ರಶ್ನೆ - ಕೇನ ಜಿತಂ ಜಗದೇತತ್ ?
ಈ ಜಗತ್ತನ್ನು ಯಾರು ಗೆಲ್ಲುತ್ತಾರೆ ?
ಉತ್ತರ - ಸತ್ಯ-ತಿತಿಕ್ಷಾವತಾ ಪುಂಸಾ
ಸತ್ಯ ಮತ್ತು ಸಹನೆಗಳಿಂದ ಕೂಡಿದ ಮನುಷ್ಯನು ಈ
ಜಗತ್ತನ್ನು ಗೆಲ್ಲುತ್ತಾನೆ.

ಪ್ರಶ್ನೆ - ಕಸ್ಯ ವಶೇ ಪ್ರಾಣಿಗಣಃ ?
ಪ್ರಾಣಿ ಸಮೂಹವು ಯಾರ ಅಧೀನದಲ್ಲಿರುತ್ತದೆ ?
ಉತ್ತರ - ಸತ್ಯ-ಪ್ರಿಯಭಾಷಿಣೋ ವಿನೀತಸ್ಯ
ಪ್ರಾಣಿ
ಸಮೂಹವು ಸತ್ಯವದುದನ್ನು ಮತ್ತು ಪ್ರಿಯವಾದುದನ್ನು ಮಾತನಾಡುವ
ವಿನಯಶಾಲಿಯ ವಶದಲ್ಲಿ ಇರುತ್ತದೆ.

ಪ್ರಶ್ನೆ - ಕ್ವ ಸ್ಥಾತವ್ಯಮ್ ?
ಎಲ್ಲಿ ಸ್ಥಿರವಾಗಿ ನಿಲ್ಲಬೇಕು ?
ಉತ್ತರ - ನ್ಯಾಯ್ಯೇ ಪಥಿ ದೃಷ್ಟ - ಅದೃಷ್ಟ -
ಲಾಭಾಢ್ಯೇ
ದೃಷ್ಟ ಮತ್ತು ಅದೃಷ್ಟ
(ಕಂಡು ಕಾಣದ )ಲಾಭದಿಂದ ಸಮೃದ್ಧವಾದ
ನ್ಯಾಯಯುತವಾದ
ಮಾರ್ಗದಲ್ಲಿ ಸದಾ ನಿಲ್ಲಬೇಕು.

ಪ್ರಶ್ನೆ - ಕಿಮ್ ದಾನಮ್ ?
ದಾನವು ಯಾವುದು ?
ಉತ್ತರ - ಅನಾಕಾಂಕ್ಷಮ್
ಪ್ರತಿಫಲವನ್ನು ಬಯಸದೇ ಮಾಡಿದ
ದಾನವೇ ನಿಜವಾದ ದಾನವು .

ಪ್ರಶ್ನೆ - ಕಿಮ್ ಮಿತ್ರಮ್ ?
ನಿಜವಾದ ಮಿತ್ರನು ಯಾರು ?
ಉತ್ತರ - ಯೋ ನಿವಾರಯತಿ ಪಾಪಾತ್
ಪಾಪ ಕಾರ್ಯಗಳನ್ನು ಮಾಡದಂತೆ
ತಡೆಯುವನು ನಿಜವಾದ ಮಿತ್ರನು.

ಪ್ರಶ್ನೆ - ಕಿಮ್ ಶೋಚ್ಯಮ್ ?
ದುಃಖಕರವಾದುದು ಯಾವುದು ?
ಉತ್ತರ - ಕಾರ್ಪಣ್ಯಮ್
ದಾರಿದ್ರ್ಯವು (ಬಡತನವು) ಕಷ್ಟಕರವಾದದ್ದು..

ಪ್ರಶ್ನೆ - ಕಃ ಪರಿಹರ್ಯೋ ದೇಶಃ ?
ಎಂತಹ ದೇಶದಿಂದ ದೂರ ಇರಬೇಕು ?
ಉತ್ತರ - ಪಿಶುನಯುತೋ ಲುಬ್ಧಭೂಪಶ್ಚ
ಕ್ರೂರರಾದ ಪ್ರಜೆಗಳುಳ್ಳ ಮತ್ತು ಲೋಭಿಯಾದ
ರಾಜನುಳ್ಳ ದೇಶವನ್ನು ತೊರೆಯಬೇಕು.

ಪ್ರಶ್ನೆ - ಇಹ ಭುವನೇ ಕೋ ಶೋಚ್ಯಃ ?
ವಿಶ್ವದಲ್ಲಿ ಸದಾ ದುಃಖದಲ್ಲಿರುವವನು ಯಾರು ?
ಉತ್ತರ - ಸತ್ಯಪಿ ಭುವನೇ ಯೋ ನ ದಾತಾ
ಸಂಪತ್ತಿದ್ದರೂ ದಾನಿಯಾಗಿರದವನೇ ದುಃಖಿ.

ಪ್ರಶ್ನೆ - ಕಿಮಹರ್ನಿಶಂ ಅನುಚಿಂತ್ಯಮ್ ?
ಹಗಲಿರುಳು (ಸದಾಕಾಲವೂ )ಯಾವುದನ್ನು ಕುರಿತು ಚಿಂತಿಸಬೇಕು ?
ಉತ್ತರ - ಭಗವಚ್ಚರಣಮ್ ನ ಸಂಸಾರಃ
ಹಗಲಿರುಳು ಪರಮಾತ್ಮನ ಚರಣದ ಚಿಂತೆ
ಮಾಡಬೇಕೇ ವಿನಃ ಸಂಸಾರವನ್ನಲ್ಲ .

ಪ್ರಶ್ನೆ - ಕಿಮ್ ಸಂಪಾದ್ಯಂ ಮನುಜೈಃ ?
ಮಾನವರು ಏನನ್ನು ಸಂಪಾದಿಸಬೇಕು ?
ಉತ್ತರ - ವಿದ್ಯಾ , ವಿತ್ತಮ್ , ಬಲಂ , ಯಶಃ ,
ಪುಣ್ಯಮ್
ಮಾನವರು ವಿದ್ಯೆ ,ಸಂಪತ್ತು ,ಬಲ ,ಕೀರ್ತಿ
ಮತ್ತು ಪುಣ್ಯಗಳನ್ನು ಸಂಪಾದಿಸಬೇಕು .

ಪ್ರಶ್ನೆ - ಕಃ ಸರ್ವಗುಣವಿನಾಶೀ ?
ಎಲ್ಲ
ಗುಣಗಳನ್ನು ನಾಶಪಡಿಸುವಂಥಹದು ಯಾವುದು ?
ಉತ್ತರ - ಲೋಭಃ
ಲೋಭವು ಸರ್ವ ಗುಣಗಳನ್ನು ನಾಶ
ಪಡಿಸುವಂತಹದು.

ಪ್ರಶ್ನೆ - ಶತ್ರುಶ್ಚ ಕಃ ?
ವೈರಿಯು ಯಾರು ?
ಉತ್ತರ - ಕಾಮಃ
ಕಾಮವೇ ವೈರಿಯು .

ಪ್ರಶ್ನೆ - ಕಾ ಸುರಕ್ಷ್ಯಾ
ಸಂರಕ್ಷಿ ಸಲ್ಪಡತಕ್ಕಂಥಹದು ಯಾವುದು ?
ಉತ್ತರ - ಕೀರ್ತಿಃ , ಪತಿವ್ರತಾ , ನೈಜಬುದ್ಧಿಶ್ಚ
ಕೀರ್ತಿ ,ಪತಿವ್ರತೆ ಮತ್ತು ಸ್ವಂತ ಬುದ್ಧಿ (ಸ್ವಂತ
ವಿಚಾರ ಶಕ್ತಿ ) ಇವು ಸಂರಕ್ಷಿಸಲು ಅರ್ಹ .

ಪ್ರಶ್ನೆ - ಕಾ ಕಲ್ಪಲತಾ ಲೋಕೇ ?
ಜಗತ್ತಿನ್ನಲ್ಲಿ ಕಲ್ಪಲತೆ ಯಾವುದು ?
(ಬೇಡಿದ್ದನ್ನು ,ಬಯಸಿದ್ದನ್ನು ಕೊಡುವ ಬಳ್ಳಿ )
ಉತ್ತರ - ಸಚ್ಛಿಷ್ಯಾಯ ಅರ್ಪಿತಾ ವಿದ್ಯಾ
ಒಳ್ಳೆಯ ಶಿಷ್ಯನಿಗೆ ಗುರುವು ನೀಡಿದ ವಿದ್ಯೆಯು
ಜಗತ್ತಿನಲ್ಲಿ ಕಲ್ಪಲತೆ .

ಪ್ರಶ್ನೆ - ಪಾತಕಂ ಚ ಕಿಮ್ ?
ಪಾತಕವು ಯಾವುದು ?
ಉತ್ತರ - ಹಿಂಸಾ
ಹಿಂಸೆಯೇ(ಕ್ರೂರತೆ) ಪಾತಕವು.

ಪ್ರಶ್ನೆ - ಸಂಭಾವಿತಸ್ಯ ಮರಣಾತ್ ಅಧಿಕಂ ಕಿಮ್ ?
ಒಳ್ಳೆಯವನಿಗೆ ಸಾವಿಗಿಂತಲೂ
ಹೆಚ್ಚು ದುಃಖದಾಯಕ ಯಾವುದು ?
ಉತ್ತರ - ದುರ್ಯಶೋ ಭವತಿ
ಅಪಕೀರ್ತಿಯು ಮರಣಕ್ಕಿಂತಲೂ
ಹೆಚ್ಚು ದುಃಖದಾಯಕ.

ಪ್ರಶ್ನೆ - ಕೋ ವರ್ಧತೇ ?
ಯಾರು ಪ್ರಗತಿ ಯನ್ನು ಹೊಂದುತ್ತಾರೆ ?
ಉತ್ತರ - ವಿನೀತಃ
ವಿನಮ್ರ ನಾದವನು (ವಿನಯಶಾಲಿಯು )
ಪ್ರಗತಿಯನ್ನು ಹೊಂದುತ್ತಾನೆ .

ಪ್ರಶ್ನೆ - ಕಿಮ್ ಭಾಗ್ಯಂ ದೇಹವತಾಮ್ ?
ದೇಹಿಗಳಿಗೆ (ಮನುಷ್ಯರಿಗೆ)
ಭಾಗ್ಯವು ಯಾವುದು ?
ಉತ್ತರ - ಆರೋಗ್ಯಮ್
ಆರೋಗ್ಯವೇ ಭಾಗ್ಯವು .

ಪ್ರಶ್ನೆ - ಕೋ ಜಗದ್ಭರ್ತಾ ?
ಜಗತ್ತಿನ ಸಂರಕ್ಷಕನ್ಯಾರು ?
ಉತ್ತರ - ಸೂರ್ಯಃ
ಸೂರ್ಯ.

ಪ್ರಶ್ನೆ - ಸರ್ವೇಷಾಂ ಕೋ ಜೀವನಹೇತುಃ ?
ಎಲ್ಲರ ಬದುಕಿಗೆ ಕಾರಣನು ಯಾರು ?
ಉತ್ತರ - ಸ ಪರ್ಜನ್ಯಃ
ಪರ್ಜನ್ಯನು (ಮಳೆ ) ಎಲ್ಲರ ಬದುಕಿಗೆ ಕಾರಣನು .

ಪ್ರಶ್ನೆ - ಕಃ ಶೂರಃ ?
ಶೂರನು ಯಾರು ?
ಉತ್ತರ - ಯೋ ಭೀತತ್ರಾತಾ
ಭೀತನಾದವನನ್ನು ಕಾಪಾಡುವವನು ಶೂರನು .

ಪ್ರಶ್ನೆ - ತ್ರಾತಾ ಚ ಕಃ ?
ಮತ್ತೆ ಕಾಪಾಡುವವನು ಯಾರು ?
ಉತ್ತರ - ಸ ಗುರುಃ
ಗುರುವೇ ಕಾಪಾಡುವವನು.

ಪ್ರಶ್ನೆ - ಪ್ರತ್ಯಕ್ಷದೇವತಾ ಕಾ ?
ಪ್ರತ್ಯಕ್ಷ(ಸಾಕ್ಷಾತ್ ) ದೇವತೆ ಯಾರು ?
ಉತ್ತರ - ಮಾತಾ
ತಾಯಿಯೇ ಪ್ರತ್ಯಕ್ಷ ದೇವತೆಯು .

ಪ್ರಶ್ನೆ - ಪೂಜ್ಯೋ ಗುರುಶ್ಚ ಕಃ ?
ಪೂಜ್ಯ ಗುರುವು ಯಾರು ?
ಉತ್ತರ - ತಾತಃ
ತಂದೆಯೇ ಪೂಜ್ಯ ಗುರುವು .

ಪ್ರಶ್ನೆ - ಪಾತ್ರಂ ಕಿಮ್ ಅನ್ನದಾನೇ ?
ಅನ್ನದಾನಕ್ಕೆ ಅರ್ಹನಾರು ?
ಉತ್ತರ - ಕ್ಷುಧಿತಮ್
ಹಸಿದವನು ಅನ್ನದಾನಕ್ಕೆ ಅರ್ಹನು .

ಲೋಕಾಃ ಸಮಸ್ತಾಃ ಸುಖಿನೋ ಭವಂತು.

ಜೀವನದಲ್ಲಿ ಇಷ್ಟು ಪ್ರಶ್ನೆಗಳಿಗೆ ಉತ್ತರ
ಕಂಡುಕೊಂಡರೆ ಸಾಕು..
ತತ್ವಜ್ಞಾನವನ್ನರಿಯಲು
ಇನ್ನ್ಯಾವ ಶಾಸ್ತ್ರ-ಪುರಾಣಗಳ ಅಗತ್ಯತೆಯಿಲ್ಲ..

No comments:

Post a Comment